ಈಗಾಗಲೇ ಬಂಧನವಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಧೀಶರು, ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿದ ನಂತರ ಜಾಮೀನು ನೀಡಬಹುದು ಎಂದು ಹೇಳಿದ್ದಾರೆ. ಚೆನ್ನೈ: ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ವಿಚಾರಣೆ ನಡೆಸಿದ ನಂತರ ಸ್ಟೇಷನ್ ಜಾಮೀನಿನ ಮೇಲೆ ಇಂದೇ ಬಿಡುಗಡೆ ಮಾಡುವಂತೆ ಮಂಗಳವಾರ ಮದ್ರಾಸ್ ಹೈಕೋರ್ಟ್, ಪೊಲೀಸರಿಗೆ ನಿರ್ದೇಶನ ನೀಡಿದೆ. ಈಗಾಗಲೇ ಬಂಧನವಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಧೀಶರು, ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿದ ನಂತರ ಜಾಮೀನು ನೀಡಬಹುದು ಎಂದು ಹೇಳಿದ್ದಾರೆ. ಉದಯನಿಧಿ ಸ್ಟಾಲಿನ್ ಅವರನ್ನು ಈಗಾಗಲೇ ಬಂಧಿಸಲಾಗಿದೆ ಮತ್ತು ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ನ್ಯಾಯಾಲಯಕ್ಕೆ ತಿಳಿಸಿದರು. ಸರ್ಕಾರವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರುವ ಉದ್ದೇಶವನ್ನು ಹೊಂದಿಲ್ಲ ಮತ್ತು ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಪೊಲೀಸರೊಂದಿಗೆ ಸಹಕರಿಸುವಂತೆ ಉದಯನಿಧಿ ಸ್ಟಾಲಿನ್ ಅವರಿಗೆ ನಿರ್ದೇಶನ ನೀಡುವಂತೆಯೂ ಅವರು ನ್ಯಾಯಾಲಯಕ್ಕೆ ವಿನಂತಿಸಿದರು. ತಂಜಾವೂರಿನಲ್ಲಿ ಸೋಮವಾರ ನಡೆದ ಕಾವೇರಿ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿರುವ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನೀಲಂಕರೈನ ಪೂರ್ವ ಕರಾವಳಿ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ತಂಜಾವೂರು ಮತ್ತು ನೀಲಂಕರೈ ಪೊಲೀಸರ ಜಂಟಿ ತಂಡ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿದೆ. ಈ ಬಂಧನವು ರಾಜ್ಯಾದ್ಯಂತ ಡಿಎಂಕೆ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಗಿದ್ದು, ತಂಜಾವೂರಿನಲ್ಲಿ, ಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಂತೆ ಕೆಲಕಾಲ ಉದ್ವಿಗ್ನತೆ ಉಂಟಾಯಿತು. #Tamilnadu #Trisharemark #Release Udhayanidhi Stalin#Madras HC #ತಮಿಳುನಾಡು#ತ್ರಿಶಾಹೇಳಿಕೆ#ಉದಯನಿಧಿಸ್ಟಾಲಿನ್ ಬಿಡುಡಗೆಮಾಡಿ#ಮದ್ರಾಸ್ ಹೈಕೋರ್ಟ್ Share via: Facebook X (Twitter) LinkedIn More Post navigation 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ!